ಬೆಂಗಳೂರು: ಚಲನಚಿತ್ರ ನಟ ಪ್ರಕಾಶ್ ರೈ ವಿರುದ್ಧ ಟ್ಟಿಟರ್ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಕೊನೆಗೂ ಜನಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆಯೇ ಸೂಚನೆ ನೀಡಿದ್ದರೂ ಗೈರು ಹಾಜರಾಗಿದ್ದ ಪ್ರತಾಪ್ ಸಿಂಹ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು.ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಇಂದು ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರಾಗಿ ವಾರಂಟ್ ರದ್ದುಗೊಳಿಸುವಂತೆ ಮನವಿ ಮಾಡಿದ್ದರು. ಇದನ್ನೊಪ್ಪದ ನ್ಯಾಯಾಲಯ, ಅವರನ್ನು ಕೆಲ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿತ್ತು. ನಂತರ, ಸಂಜೆ 10 ಸಾವಿರ ರೂ. ಖಾತರಿ ಹಣ ಪಡೆದು ಜಾಮೀನು ಮಂಜೂರು ಮಾಡಿತು.
Advertisement