ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟಗೊಂಡ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ನಿನ್ನೆಯಿಂದಲೇ ಆರಂಭಗೊಂಡಿದೆ.
ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರು ಭಾನುವಾರ ರಾತ್ರಿಯಿಂದಲೇ ಎಲ್ಲಾ ಸರ್ಕಾರಿ ಜಾಹೀರಾತುಗಳನ್ನು ತೆರವುಗೊಳಿಸಲು ಮುಂದಾಗಿದೆ.
ಚುನಾಯಿತ ಜನಪ್ರತಿನಿಧಿಗಳಿರುವ ಜಾಹೀರಾತನ್ನು ತೆರವುಗೊಳಿಸಲಾಗಿದೆ. ಬಸ್ ನಿಲ್ದಾಣ, ಸ್ಕೈವಾಕ್, ಹಾಗೂ ಸಾರ್ವಜನಿಕ ಶೌಚಾಲಯ ಹಾಗೂ ಕುಡಿಯುವ ನೀರನ ಬೂತ್ ಗಳ ಮೇಲಿರುವ ಎಲ್ಲಾ ಸರ್ಕಾರಿ ಜಾಹೀರಾತುಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿ ಆಯುಕ್ತ ಎಲ್ಲಾ ಇಂಜಿನೀಯರ್ಸ್ ಮತ್ತು ಅಧಿಕಾರಿಗಳಿಗೆ ಸೂಚಿಸಿದ್ದಾರೆ.