ಪಕ್ಷದಿಂದ ಬಂಡಾಯ ಎದ್ದಿದ್ದ ಶಾಸಕರಾದ ಉಮೇಶ್ ಜಾಧವ್, ರಮೇಶ್ ಜಾರಕಿಹೊಳಿ, ನಾಗೇಂದ್ರ ಹಾಗೂ ಮಹೇಶ್ ಕುಮಟಹಳ್ಳಿ ಅವರಿಗೆ ವಿಪ್ ಜಾರಿಯಾಗಿದ್ದರೂ ಕಾಂಗ್ರೆಸ್ ಶಾಸಕಾಂಗ ಸಭೆಗೆ ಸತತ ಗೈರು ಹಾಜರಾಗಿದ್ದು, ಇವರ ವಿರುದ್ಧ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರು ಸ್ಪೀಕರ್ ಗೆ ದೂರು ನೀಡಿ, ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಕ್ರಮ ಜರುಗಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದರು.