ಮಂಗಳೂರು-ಮೈಸೂರಿಗೆ ಸಂಚರಿಸುವ ಐರಾವತ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯಾಗಿರುವ ಕೊಡಗು ಮೂಲದ ಯುವತಿ ಹಿಂಭಾಗದ ಸೀಟ್ ನಲ್ಲಿ ಕುಳಿತಿದ್ದ 50 ವರ್ಷದ ವ್ಯಕ್ತಿ ಈಕೆಯನ್ನು ಅನುಚಿತವಾಗಿ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಪದೇ ಪದೇ ಇದನ್ನು ಗಮನಿಸಿದ ಯುವತಿ ಆತನೊಂದಿಗೆ ವಾಗ್ವಾದಕ್ಕೆ ಮುಂದಾಗಿದ್ದಾರೆ. ಆದರೆ ಬಸ್ ನಲ್ಲಿದ್ದ ಯಾರೂ ಸಹ ಯುವತಿಯ ಬೆಂಬಲಕ್ಕೆ ಧಾವಿಸಲಿಲ್ಲ. ವಿಚಿತ್ರವೆಂದರೆ ಬಸ್ ನಲ್ಲಿದ್ದ ಚಾಲಕ ಹಾಗೂ ನಿರ್ವಾಹಕ ಸಹ ಯುವತಿಗೆ ರಕ್ಷಣೆಗೆ ಧಾವಿಸಲಿಲ್ಲ. ಆದರೆ ಘಟನೆಯನ್ನು ಅಲ್ಲಿಗೇ ಬಿಡದ ಯುವತಿ, ಅದನ್ನು ಕೆಎಸ್ ಆರ್ ಟಿಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ನಂತರ ಪೊಲೀಸ್ ಆಯುಕ್ತರ ಗಮನಕ್ಕೆ ತಂದಿದ್ದು, ಘಟನೆಯನ್ನು ವಿವರಿಸಿದ್ದಾರೆ. ಆಯುಕ್ತರ ಕಚೇರಿಯಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಮುತ್ತುರಾಜು ಸ್ಥಳೀಯ ಲಷ್ಕರ್ ಪೊಲೀಸ್ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದಾರೆ. ಪ್ರಕರಣವನ್ನು ಕೈಗೆತ್ತಿಕೊಂಡ ಪಿಎಸ್ಐ ಪೂಜಾ 48 ಗಂಟೆಗಳಲ್ಲಿ ಆರೋಪಿಯನ್ನು ಪತ್ತೆ ಮಾಡಿದ್ದಾರೆ.