ಮುಂಡರಗಿ ಕಾಲೇಜಿನಲ್ಲಿ ಪಾಠಮಾಡಲು ತೆರಳುತ್ತಿದ್ದ ಸ್ವಾಮೀಜಿ ಅದೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಸ್ನೇಹ ಬೆಳೆಸಿದ್ದಾರೆ. ಬಳಿಕ ಅದೇ ಸ್ನೇಹ ಪ್ರೀತಿಯಾಗಿ ಬದಲಾಗಿದೆ. ಇದಾದ ನಂತರ ಸ್ವಾಮೀಜಿ ಆ ಯುವತಿಗಾಗಿ ಪೀಠ ತ್ಯಾಗ ಮಾಡಿ ನಾಪತ್ತೆಯಾಗಿದ್ದರು. ಈ ಕುರಿತಂತೆ ಭಕ್ತರು ಪ್ರಶ್ನಿಸಲು ಮಠದ ಆಡಳಿತ ಮಂಡಳಿ "ಸ್ವಾಮೀಜಿ ವೈಯುಕ್ತಿಕ ಕಾರಣದಿಂದ ಪೀಠತ್ಯಾಗ ಮಾಡಿದ್ದಾರೆ" ಎಂದು ಹಾರಿಕೆಯ ಉತ್ತರ ನೀಡಿ ಮೌನವಾಗಿತ್ತು.