ಬೆಂಗಳೂರು: ಜೆಡಿಎಸ್ ಅಭ್ಯರ್ಥಿ ಪರ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರು ಕೆಲಸ ನಿರ್ವಹಿಸುವುದು ಕಷ್ಟಕರವಾಗಿದೆ. ಜೆಡಿಎಸ್ ನಾಯಕರಿಂದ ಆಗುತ್ತಿರುವ ಕಿರುಕುಳದ ಬಗ್ಗೆ ಸಚಿವ ರೇವಣ್ಣ ಖುದ್ದಾಗಿ ಭರವಸೆ ನೀಡಿದರಷ್ಟೇ ಮೈತ್ರಿ ಅಭ್ಯರ್ಥಿಗೆ ಬೆಂಬಲ.ಇಲ್ಲದಿದ್ದಲ್ಲಿ ಜೆಡಿಎಸ್ ಬೆಂಬಲಿಸುವ ಪ್ರಶ್ನೆಯೇ ಇಲ್ಲ ಎಂದು ಹಾಸನ ಜಿಲ್ಲಾ ಮುಖಂಡರು ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.