ಚಿತ್ರದುರ್ಗ: ನ್ಯಾಯಾಲಯ ಕಟ್ಟಡದಿಂದ ಹಾರಿ ಅತ್ಯಾಚಾರ ಪ್ರಕರಣದ ಕೈದಿ ಸಾವು

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಆರೋಪಿಗಳಿಬ್ಬರು ಕಟ್ಟಡದಿಂದ ಜಿಗಿದಿದ್ದು, ಈ ವೇಳೆ ಒಬ್ಬ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಚಿತ್ರದುರ್ಗ: ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಆರೋಪಿಗಳಿಬ್ಬರು ಕಟ್ಟಡದಿಂದ ಜಿಗಿದಿದ್ದು, ಈ ವೇಳೆ ಒಬ್ಬ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹಿರೇಗುಂಟನೂರು ಗ್ರಾಮದ ಸುನಿಲ್ ಮೃತ ವ್ಯಕ್ತಿ. ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ
ಸುನಿಲ್ ಗೆ ಮಣಿಕಂಠ, ವೀರಭದ್ರ, ಅವಿನಾಶ್ ಸಾಥ್ ನೀಡಿದ್ದರು. ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. 
ಜಿಲ್ಲಾ ಕೋರ್ಟ್ ನಲ್ಲಿ ವಿಚಾರಣೆ ನಡೆದು, ಮೊದಲನೇ ಆರೋಪಿಗೆ ಜೀವಾವಧಿ ಶಿಕ್ಷೆ ನೀಡಿದ್ದು, ಉಳಿದ ಆರೋಪಿಗಳಿಗೆ 10 ವರ್ಷ ಸಜೆ, 10,000 ರೂ. ದಂಡ ವಿಧಿಸಲಾಗಿದೆ.
ನ್ಯಾಯಾಧೀಶರು ತೀರ್ಪು ಪ್ರಕಟಿಸಿದ ಬಳಿಕ ಸುನಿಲ್ ಮತ್ತು ವೀರಭದ್ರ ತಪ್ಪಿಸಿಕೊಳ್ಳಲು ಯತ್ನಿಸಿ ಕೋರ್ಟ್ ಕಟ್ಟಡದ ಮೇಲಿನಿಂದ ಹಾರಿದ್ದಾರೆ. ಕೈಯಲ್ಲಿ ಬೇಡಿ ಹಾಕಿದ್ದ ಕಾರಣ, ಸುನಿಲ್ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ವೀರಭದ್ರನನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com