ಧಾರಾವಾಡದ ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಸಂಪೂರ್ಣ ನೆಲಸಮವಾಗಿದ್ದು, ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿದ್ದಾರೆ. ನಿರ್ಮಾಣ ಹಂತದ ಕಟ್ಟಡ ಕುಸಿದು ಅವಶೇಷಗಳ ಅಡಿ ಸಿಕ್ಕಿಹಾಕಿಕೊಂಡಿರುವ ಮೂವರು ಜೀವಂತವಾಗಿರುವ ಮಾಹಿತಿ ರಕ್ಷಣಾ ತಂಡಗಳಿಗೆ ಸಿಕ್ಕಿದೆ. ದಿಲೀಪ್, ಸೋಮು ಮತ್ತು ಸಂಗೀತ ಎನ್ನುವರರು ಜೀವಂತವಾಗಿ ಅವಶೇಷಗಳ ಅಡಿ ಸಿಕ್ಕಿಹಾಕಿಕೊಂಡಿದ್ದಾರೆ. ಈ ಮೂವರು ಪಾರ್ಕಿಂಗ್ ಪ್ರದೇಶದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಬದುಕುಳಿದ ಮೂವರ ಪೈಕಿ ದಿಲೀಪ್ ಎಂಬುವವರು ಮಾಹಿತಿ ನೀಡಿದ್ದಾರೆ.