ಅಂತೆಯೇ ಘಟನೆಗೆ ಸಂಬಂಧಿಸಿ ಸ್ಥಳೀಯ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಜರುಗಿಸಿದೆ. ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯದ ಆರೋಪದ ಮೇರೆಗೆ ಒಟ್ಟು 7 ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಲಯ 3ರ ಸಹಾಯಕ ಆಯುಕ್ತರಾದ ಸಂತೋಷ್ ಅನಿಶೆಟ್ಟರ್, ನಗರ ಯೋಜನೆ ಸಹಾಯಕ ನಿರ್ದೇಶಕ ಅಶೋಕ್ ಗದಗ್, ಪಟ್ಟಣ ಯೋಜನೆ ಅಧಿಕಾರಿ ಮುಕುಂದ್ ಜೋಷಿ, ಕಾರ್ಯನಿರ್ವಾಹಕ ಇಂಜಿನಿಯರ್ ವಿ.ಶ್ರೀಧರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಪ್ಪ ನಾಗರ, ಯೋಜನಾ ಇಲಾಖೆಯ ಹೆಚ್ಚುವರಿ ನಿರ್ದೇಶಕ ಬಿ.ವಿ.ಹಿರೇಮಠ್ ಅವರನ್ನು ಅಮಾನತು ಮಾಡಲಾಗಿದ್ದು, ವಿಚಾರಣೆ ಬಾಕಿ ಇದೆ ಎಂದು ಮೂಲಗಳು ತಿಳಿಸಿವೆ.