ಈ ಸಂದರ್ಭದಲ್ಲಿ ಪಲಿಮಾರು ಶ್ರೀಗಳು ಮಾತನಾಡಿ, ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಉಡುಪಿಗೆ ಕಳುಹಿಸಿಕೊಡಿ, ಕೃಷ್ಣಮಠದಲ್ಲಿ ಅವರಿಗೆ ಗೌರವಾರ್ಪಣೆ ಮಾಡಬೇಕು. ನಮಗೆ ಅಭಿನಂದನ್ ಅವರ ಪರಾಕ್ರಮ ಬಹಳ ಮೆಚ್ಚುಗೆಯಾಗಿದೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್, ಕಾನೂನಾತ್ಮಕ ಅಡೆ-ತಡೆ ಇಲ್ಲದಿದ್ದರೆ ಕಳುಹಿಸಿಕೊಡುತ್ತೇವೆ. ರಕ್ಷಣಾ ಇಲಾಖೆಗೆ ಒಂದು ಪತ್ರ ಬರೆಯಿರಿ ಎಂದರು.