ಬುಧವಾರ ಮಧ್ಯಾಹ್ನವಷ್ಟೇ ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿಎಂ ಕುಮಾರಸ್ವಾಮಿ, ಬಿಜೆಪಿಯ ಆಪ್ತ ಮೂಲಗಳಿಂದ ನನಗೆ ಫೋನ್ ಕರೆ ಬಂದಿದ್ದು, ಕಾಂಗ್ರೆಸ್, ಜೆಡಿಎಸ್ ಅಭಿಮಾನಿಗಳನ್ನು ಗುರಿ ಮಾಡಿ ದಾಳಿ ನಡೆಸಲು ಸಿದ್ಧತೆ ನಡೆಸಲಾಗಿದೆ. ಪಕ್ಷ ಬೆಂಬಲಿಗರ ಮೇಲೆ ದಾಳಿ ನಡೆಸಿ ಎಷ್ಟು ಹಣ ತೆಗೆದುಕೊಂಡು ಹೋಗುತ್ತಾರೆ ನೋಡುತ್ತೇನೆ. ಆದರೆ ನಮ್ಮ ಮೇಲೆ ದಬ್ಬಾಳಿಕೆ ನಡೆಸಿದರೆ ನಾನು ಕೂಡ ಪಶ್ಚಿಮ ಬಂಗಾಳ ಸಿಎಂರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.