ಶಿವಮೊಗ್ಗ: ಕಾರು ಮತ್ತು ಗೂಡ್ಸ್ ವಾಹನದ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಚಿಕ್ಕದನವಂಡಿ ಎಂಬಲ್ಲಿ ನಡೆದಿದೆ. ಕಾರಿನ ಟೈರ್ ಹೊತ್ತಿಕೊಂಡು ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆಯಿತು ಎಂದು ಪೊಲೀಸರು ಹೇಳುತ್ತಾರೆ.
ಗಾಯಗೊಂಡಿರುವ ನೀಲಕಂಠಪ್ಪನವರ ಕಿರಿಯ ಪುತ್ರ ಲವಿಯನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.