ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಏ. 16ರಂದು ಶವವಾಗಿ ಪತ್ತೆಯಾಗಿದ್ದಾಗಿನಿಂದ ಇದು ರಾಜ್ಯಾದ್ಯಂತ ಬಾರೀ ಚರ್ಚೆಗೆ ಗ್ರಾಸವಾಗಿತ್ತು. ವಿದ್ಯಾರ್ಥಿನಿ ಸಾವನ್ನು ಖಂಡಿಸಿ ರಾಯಚೂರು, ಹುಬ್ಬಳ್ಳಿ, ಬೆಂಗಳೂರು ಸೇರಿ ಅನೇಕ ಕಡೆ ಪ್ರತಿಭಟನೆಗಳು ನಡೆದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಸಿಐಡಿಗೆ ವಹಿಸಿದೆ.