ಮಂಗಳೂರು: ಈ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಬಂದಿದ್ದು ಹಾಸನ ಮೊದಲ ಸ್ಥಾನ ಗಳಿಸಿದೆ. ಇತ್ತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತುಳು ಭಾಷೆಯನ್ನು ಐಚ್ಚಿಕ ವಿಷಯವಾಗಿ ಬೋಧಿಸಲಾಗುತ್ತಿದ್ದು ಈ ಬಾರಿ ಎಸ್.ಎಲ್.ಎಲ್.ಸಿ. ಪರೀಕ್ಷೆಯಲ್ಲಿ ಒಟ್ಟು 617 ವಿದ್ಯಾರ್ಥಿಗಳು ತುಳು ಭಾಷೆ ಪರೀಕ್ಷೆ ಬರೆದಿದ್ದಾರೆ. ಅದರಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದು ಶೇ. 100 ಫಲಿತಾಶ ದಾಖಲಾಗಿದೆ. ಅದರಲ್ಲಿಯೂ 63 ವಿದ್ಯಾರ್ಥಿಗಳು ನೂರಕ್ಕೆ100 ಅಂಕ ಪಡೆದಿದ್ದಾರೆ.