ನಾನು ಸಾಮಾನ್ಯವಾಗಿ ದೆವ್ವ, ಭೂತಗಳನ್ನು ನಂಬುವುದಿಲ್ಲ. ಆದರೆ ಮನೆಯಲ್ಲಿ ಹಿರಿಯರು ಹೇಳುವುದನ್ನು ಕೇಳುತ್ತೇನೆ. ಮಧ್ಯಾಹ್ನ ನಂತರ ಮತ್ತು ರಾತ್ರಿ ಹೊತ್ತು ಆ ರಸ್ತೆಯಲ್ಲಿ ಹೋಗಬೇಡ ಎಂದು ಪೋಷಕರು ಹೇಳುತ್ತಾರೆ. ಏನಾದರೂ ಕೆಟ್ಟದು ಆದರೆ ಎಂಬ ಭಯ ಅವರಿಗೆ. ನನ್ನಂತೆ ಹಲವು ಮನೆಗಳಲ್ಲಿ ಪೋಷಕರು ಮಕ್ಕಳಿಗೆ ಹೀಗೆ ಹೇಳುತ್ತಾರೆ ಎನ್ನುತ್ತಾರೆ ಕುಮಾರೇಶ್ವರ ನಗರದ ನಿವಾಸಿಯೊಬ್ಬರು.