ಎಸ್ ಡಿಎಂ ಕೈಗಾರಿಕಾ ತರಬೇತಿ ಸಂಸ್ಥೆಗೆ ಕೇಂದ್ರದಿಂದ 2 ಕೋಟಿ ರೂ. ಬಿಡುಗಡೆ

ದಕ್ಷಿಣ ಕನ್ನಡದ ವೇಣೂರಿನ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವಾಲಯ ಎರಡು ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.
ಎಸ್ ಡಿಎಂ ಕೈಗಾರಿಕಾ ತರಬೇತಿ ಸಂಸ್ಥೆ
ಎಸ್ ಡಿಎಂ ಕೈಗಾರಿಕಾ ತರಬೇತಿ ಸಂಸ್ಥೆ
ಉಜಿರೆ: ದಕ್ಷಿಣ ಕನ್ನಡದ ವೇಣೂರಿನ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವಾಲಯ ಎರಡು ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.
ಮಂಜುನಾಥೇಶ್ವೇರ ಸಂಸ್ಥೆಯ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಕೇಂದ್ರ ಸರ್ಕಾರ ಈ ಅನುದಾನ ಮಂಜೂರು ಮಾಡಿದೆ. 
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಅವರು, ಉಜಿರೆಯಲ್ಲಿ ಕೌಶಲಾಭಿವೃದ್ದಿಗೆ ಸಂಬಂಧಿಸಿದಂತೆ ವಿಸ್ತರಣಾ ಚಟುವಟಿಕೆಗಳಿಗೆ ಈ ಹಣ ಬಳಸಿಕೊಳ್ಳಲಾಗುವುದು ಎಂದರು.
ಸಂಸ್ಥೆಯ ನಿರ್ವಹಣೆ, ತರಬೇತುದಾರರ ಕುಶಲತೆ ಹೆಚ್ಚಿಸುವ, ವಿದ್ಯಾರ್ಥಿಗಳಿಗೆ ಉನ್ನತ ತರಬೇತಿ ನೀಡುವ, ಆಧುನಿಕ ಯಂತ್ರೋಪಕರಣಗಳ ಸೌಲಭ್ಯ ಅಳವಡಿಸುವುದು ಸೇರಿದಂತೆ ಮುಂತಾದ ಕಾರ್ಯಕ್ರಮಗಳಿಗೆ ಈ ಅನುದಾನ ಬಳಸಲಾಗುವುದು ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com