ನಿಮ್ಮ ಸಂಪುಟದ ಸಚಿವ ಪಿಯೂಷ್ ಗೋಯಲ್ ಗೆ ಸರಿಯಾಗಿ ಕೆಲಸ ಮಾಡಲು ಹೇಳಿ; ಪಿಎಂ ಮೋದಿಗೆ ತಿವಿದ ಸಿದ್ದರಾಮಯ್ಯ

ರೈಲು ಪ್ರಯಾಣ ವಿಳಂಬದಿಂದ ನೂರಾರು ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆ ಬರೆಯಲು ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ರೈಲು ಪ್ರಯಾಣ ವಿಳಂಬದಿಂದ ನೂರಾರು ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿಲ್ಲ. ನಿಮ್ಮ ಸಂಪುಟದ ಸಚಿವರಿಗೆ ಬುದ್ಧಿಮಾತು ಹೇಳಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿವಿದಿದ್ದಾರೆ.
ಇಂದು ಮಧ್ಯಾಹ್ನ 2 ಗಂಟೆಯಿಂದ ದೇಶಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ನೀಟ್ ಪರೀಕ್ಷೆ ನಡೆಯಲಿದೆ. ಕರ್ನಾಟಕದಲ್ಲಿ ರೈಲು ಸರಿಯಾದ ಸಮಯಕ್ಕೆ ಸಿಗದೆ ಅನೇಕ ಅಭ್ಯರ್ಥಿಗಳಿಗೆ ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಬೇರೆಯವರ ಸಾಧನೆಗಳನ್ನು ತಮ್ಮ ಸಾಧನೆ ಎಂದು ಹೇಳಿ ಬೆನ್ನು ತಟ್ಟಿಕೊಳ್ಳುವ ನೀವು ನಿಮ್ಮ ಸಂಪುಟದ ಸಚಿವರ ಅಸಾಮರ್ಥ್ಯದ ಜವಾಬ್ದಾರಿಯನ್ನು ಹೊತ್ತುಕೊಳ್ಳಲು ಸಿದ್ದರಿದ್ದೀರಾ ಎಂದು ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com