'ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗೆ ಮಾತ್ರ' ಟ್ವಿಟ್ಟರ್ ಅಭಿಯಾನಕ್ಕೆ ಸಿಎಂ ಕುಮಾರಸ್ವಾಮಿ ಸಾಥ್

ಟ್ವಿಟ್ಟರ್ ಅಭಿಯಾನ
ಟ್ವಿಟ್ಟರ್ ಅಭಿಯಾನ
ಬೆಂಗಳೂರು: ಸೋಷಿಯಲ್ ಮೀಡಿಯಾಗಳನ್ನು ಉತ್ತಮ ಕಾರ್ಯಗಳಿಗೂ ಬಳಸಿಕೊಳ್ಳಬಹುದು ಎಂಬುದಕ್ಕೆ ನಿನ್ನೆಯಿಂದ ಹರಿದಾಡುತ್ತಿರುವ ಒಂದು ಅಭಿಯಾನ ನಿದರ್ಶನವಾಗಿದೆ.
ಸೋಷಿಯಲ್ ಮೀಡಿಯಾಗಳಲ್ಲಿ ನಿನ್ನೆಯಿಂದ ಒಂದು ಅಭಿಯಾನ ಆರಂಭಗೊಂಡು ಭಾರೀ ಸದ್ದು ಮಾಡುತ್ತಿದೆ. ಅದು 'ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗೆ ಮಾತ್ರ' ಹೀಗೊಂದು ಟ್ವಿಟ್ಟರ್ ಅಭಿಯಾನ ಶುರುವಾಗಿದೆ.#KarnatakaJobsForKannadigas ಎನ್ನುವ ಹ್ಯಾಶ್​​​​ ಟ್ಯಾಗ್​​ ಬಳಸುವ ಮೂಲಕ ಕನ್ನಡಿಗರು ಭಾರೀ ಪ್ರಮಾಣದಲ್ಲಿ ಟ್ವೀಟ್​​ ಮಾಡುತ್ತಿದ್ದು, ಸದ್ಯ ಇದೇ ಹ್ಯಾಶ್​​ ಟ್ಯಾಗ್​​ ಟ್ರೆಂಡಿಂಗ್​​ ಆಗಿದೆ. ಇದಕ್ಕೆ ಸ್ವತಃ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೂಡ ಬೆಂಬಲ ನೀಡಿದ್ದು ಸಕಾರಾತ್ಮಕ ಬೆಳವಣಿಗೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com