ಬಂಟ್ವಾಳ: ಟಿಪ್ಪರ್ ಲಾರಿಗೆ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ.
ಬಂಣ್ಟ್ವಾಳದ ಅಣ್ಣಳಿಕೆ ಹಿರ್ಣಿ ರಸ್ತೆ ನಡುವಿನ ಕುಮೇರ್ ಎಂಬಲ್ಲಿ ನಡೆದ ಅಪಘಾತದಲ್ಲಿ ಸುರೇಂದ್ರ (33),ಹಾಗೂ ಅವರ ಸಂಬಂಧಿ ಜಯಲಕ್ಷ್ಮೀ (36) ಮೃತಪಟ್ಟಿದ್ದಾರೆ.
ಈ ಇಬ್ಬರೂ ಮಂಗಳೂರಿನ ಕೊಡಿಯಾಲ್ಬೈಲ್ಗೆ ತೆರಳುವಾಗ ಕರ್ಪೆ ಕಡೆಯಿಂಡ ಬಂದ ಟಿಪ್ಪರ್ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸುವ ವೇಳೆ ದಾರಿ ನಡುವೆಯೇ ಸಾವನ್ನಪ್ಪಿದ್ದಾರೆ.
ಬಂಟ್ವಾಳ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.