ಸಭೆಯ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ, ರಾಜ್ಯದ 1,324 ಗ್ರಾಮಗಳಿಗೆ ಕುಡಿಯುವ ನೀರನ್ನು ಟ್ಯಾಂಕರ್ ಗಳ ಮೂಲಕ ಒದಗಿಸಲಾಗಿದ್ದು, ಜಾನುವಾರುಗಳಿಗೆ ಮೇವು ಸಾಮಾನ್ಯ ಬೆಲೆಗೆ ದೊರಕಲು 150 ಮೇವು ಬ್ಯಾಂಕುಗಳನ್ನು ತೆರೆಯಲಾಗಿದೆ ಮತ್ತು 12 ಜಾನುವಾರು ಆಶ್ರಯಗಳನ್ನು ತೆರೆಯಲಾಗಿದೆ ಎಂದರು.