ಶುಕ್ರವಾರ ಹುಬ್ಬಳ್ಳಿಯ ಕಾಟನ್ ಕೌಂಟಿ ಕ್ಲಬ್ ನಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮತಕ್ಕಾಗಿ ಕಣ್ಣೀರು ಹಾಕಿಲ್ಲ. ಶಿವಳ್ಳಿ ನನ್ನ ಆತ್ಮೀಯ ಸ್ನೇಹಿತ. ಹೀಗಾಗಿ ಅತನನ್ನು ನೆನೆದು ಭಾವುಕನಾದೆ. ನನ್ನ ಮನೆ ಮೇಲೆ ಆದಾಯ ತೆರಿಗೆ ದಾಲಿ ಆದಾಗಲೆ ಹೆದರಲಿಲ್ಲ. ಇನ್ನು ಕಣ್ಣಿರು ಹಾಕಿ ಮತ ಕೇಳುವ ಅಗತ್ಯವಿಲ್ಲ ಎಂದರು.