ದಾವಣಗೆರೆ: ಮಚ್ಚಿನಿಂದ ರೌಡಿ ಶೀಟರ್ ನನ್ನು ಹತ್ಯೆ ಮಾಡಿರುವ ಘಟನೆ ದಾವಣಗೆರೆಯ ಎಸ್ಒಜಿ ಕಾಲೊನಿ ಬಳಿ ಎಸ್ ಎಸ್ ಆಸ್ಪತ್ರೆ ಬಳಿ ಭಾನುವಾರ ಮುಂಜಾನೆ ನಡೆದಿದೆ.
ನಾಗರಾಜ್ ಅಲಿಯಾಸ್ ಬುಳ್ ನಾಗಾ(30ವ) ಹತ್ಯೆಯಾದ ರೌಡಿಶೀಟರ್. ಇಂದು ಬೆಳಗ್ಗೆ ಬೈಕ್ ನಲ್ಲಿ ಬರುತ್ತಿದ್ದ ನಾಗರಾಜ್ ಮೇಲೆ ದುಷ್ಕರ್ಮಿಗಳ ತಂಡವೊಂದು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಚ್ಚಿ ಪರಾರಿಯಾಗಿದೆ.