ಹುಬ್ಬಳ್ಳಿಯಲ್ಲಿ ಸಿಎಂ ಕುಮಾರಸ್ವಾಮಿ ತಂಗಿದ್ದ ಹೊಟೇಲ್ ಮೇಲೆ ಐಟಿ ದಾಳಿ

ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಂಗಿದ್ದ ಹೊಟೇಲ್ ಮೇಲೆ ಆದಾಯ ತೆರಿಗೆ ...
ಸಿಎಂ ಹೆಚ್ ಡಿ ಕುಮಾರಸ್ವಾಮಿ
ಸಿಎಂ ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಂಗಿದ್ದ ಹೊಟೇಲ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಐಟಿ ಇಲಾಖೆಯ ತನಿಖಾ ತಂಡದ 8 ಜನ ಅಧಿಕಾರಿಗಳ ತಂಡ ಕಳೆದ ರಾತ್ರಿ 9.30ರ ಸುಮಾರಿಗೆ ಹುಬ್ಬಳ್ಳಿಯ ಡೆನ್ನಿಸನ್ ಅಂಡ್ ಕಾಟನ್ ಕೌಂಟಿ ಹೊಟೇಲ್ ಒಳಗೆ ಹೋದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಅಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಸಚಿವರಾದ ಡಿ ಕೆ ಶಿವಕುಮಾರ್ ಮತ್ತು ಜಮೀರ್ ಅಹ್ಮದ್ ಖಾನ್ ತಂಗಿದ್ದ ರೂಂ ಒಳಗೆ ಹೋಗಿ ತಪಾಸಣೆ ನಡೆಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ಕೇಳಲು ಸಿಎಂ ಆಗಲಿ, ಶಿವಕುಮಾರ್ ಅಥವಾ ಜಮೀರ್ ಯಾರೂ ಸಂಪರ್ಕಕ್ಕೆ ಸಿಗಲಿಲ್ಲ. ಬೆಳಗಾವಿ ಮತ್ತು ಗೋವಾ ಭಾಗದ ಐಟಿ ಅಧಿಕಾರಿಗಳ ತಂಡ ಜಂಟಿಯಾಗಿ ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿರುವ ಹೊಟೇಲ್ ಮೇಲೆ ದಾಳಿ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com