ಇಂದು ಗೋವಿಂದ ಕಲ್ಯಾಣ ಮಂಟಪದಲ್ಲಿ ತಮ್ಮನ್ನು ಭೇಟಿಯಾದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಚೆನ್ನಮ್ಮ ದಂಪತಿಯನ್ನು ಅನುಗ್ರಹಿಸಿ ಮಾತನಾಡಿದರ ಶ್ರೀಗಳು, ನಿಷ್ಕಳಂಕ, ಪ್ರಾಮಾಣಿಕ ಭಗವದ್ಭಕ್ತ ರಾಜಕಾರಣಿಯಾದ ದೇವೇಗೌಡರು ಪ್ರಧಾನಿಯಾಗಿದ್ದಾಗ ಉತ್ತಮ ಕೆಲಸಗಳ ಜತೆಗೆ ಹಲವು ಸಮಸ್ಯೆ ಬಗೆಹರಿಸಿದ್ದು, ಅವರೊಬ್ಬ ಉತ್ತಮ ಮುತ್ಸದ್ಧಿ. ರೈತ ಪರ ಹೋರಾಟಗಾರ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹೊಳೆನರಸೀಪುರದಲ್ಲಿ ತಮ್ಮನ್ನು ಭೇಟಿಯಾಗಿ ಜೈಲಿಗೆ ತೆರಳಿದ್ದರು ಎಂದರು.