ಈ ಸಂಬಂಧ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕಮಿಷನರ್ ಸಂದೀಪ್ ಪಾಟೀಲ್ "ಹಣಕಾಸು ವ್ಯವಹಾರದ ವೈಷಮ್ಯವು ಕೊಲೆಗೆ ಕಾರಣವಾಗಿದೆ. ಪೋಲೀಸರು ಆರೋಪಿಯನ್ನು ಬಂಧಿಸ ಹೋದಾಗ ಆತ ಆತ್ಮಹತ್ಯೆಗೆ ಯತ್ನಿಸಿದ್ದ. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದೇವೆ, ಆತನ ಪತ್ನಿ ಈ ಕೊಲೆಗೆ ಸಹಕಾರ ನಿಡಿದ್ದಾಳೆ, ಹಾಗಾಗಿ ಆಕೆಯನ್ನೂ ವಶಕ್ಕೆ ಪಡೆಯಲಾಗಿದೆ. ಜತೆಗೆ ಅವರು ಬಳಸಿದ್ದ ದ್ವಿಚಕ್ರ ವಾಹನ ಸಹ ಜಪ್ತಿ ಮಾಡಿದ್ದೇವೆ" ಎಂದಿದ್ದಾರೆ.