ಕಳೆದ ಸೋಮವಾರ ರಾತ್ರಿ ಐಟಿ ಇಲಾಖೆಯ ಅಧಿಕಾರಿಗಳ ತಂಡ ಸಿಎಂ ತಂಗಿದ್ದ ಹುಬ್ಬಳ್ಳಿಯ ಡೆನ್ನಿಸನ್ ಅಂಡ್ ಕಾಟನ್ ಕೌಂಟಿ ಹೊಟೇಲ್ ನ 6ನೇ ಮಹಡಿಗೆ ಹೋಗಿದ್ದಾರೆ. ಆದರೆ ಐಟಿ ಅಧಿಕಾರಿಗಳನ್ನು ತಡೆದ ಸಿಎಂ ಭದ್ರತಾ ಸಿಬ್ಬಂದಿ, ಸರ್ಚ್ ವಾರಂಟ್ ತೋರಿಸುವಂತೆ ಕೇಳಿದ್ದಾರೆ. ಈ ವೇಳೆ ಐಟಿ ಅಧಿಕಾರಿಗಳು, ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರ ವಿರುದ್ಧ ಬಿಜೆಪಿ ವಾಟ್ಸ್ ಆಪ್ ಮೂಲಕ ಚುನಾವಣಾ ಆಯೋಗಕ್ಕೆ ನೀಡಿರುವ ದೂರಿನ ಪ್ರತಿಯನ್ನು ಮತ್ತು ಐಟಿ ಇಲಾಖೆ ಆದೇಶವನ್ನು ತೋರಿಸಿದ್ದಾರೆ.