ಭರತ್, ಸಿಟಿ ಮಾರುಕಟ್ಟೆಯ ಕಾಂಪ್ಲೆಕ್ಸ್ ಬಳಿ ನಿಂಬೆಹಣ್ಣು ವ್ಯಾಪಾರ ಮಾಡುತ್ತಿದ್ದರೆ, ಶರವಣ ನಿಂಬೆಹಣ್ಣಿನ ಜತೆಗೆ ತರಕಾರಿ ವ್ಯಾಪಾರ ಕೂಡ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಕಳೆದ ಒಂದು ತಿಂಗಳ ಹಿಂದೆ ಇವರಿಬ್ಬರ ನಡುವೆ ವ್ಯಾಪಾರ ನಡೆಸುವ ಜಾಗದ ವಿಚಾರಕ್ಕೆ ಜಗಳ ಉಂಟಾಗಿತ್ತು. ಜಗಳ ವಿಕೋಪಕ್ಕೆ ಹೋದಾಗ ಭರತ್ , ಶರವಣನ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿದ್ದ ಪೊಲೀಸರು ಇಬ್ಬರನ್ನೂ ಜೈಲಿಗೆ ಕಳುಹಿಸಿದ್ದರು. ಕೆಲವೇ ದಿನಗಳಲ್ಲಿ ಅವರಿಬ್ಬರೂ ಜಾಮೀನಿನ ಮೇಲೆ ಹೊರಬಂದಿದ್ದರು.