ರಾಮನಗರ: ಸಾಮಾಜಿಕ ಜಾಲತಾಣಗಳಲ್ಲಿ ಇಷ್ಟು ದಿನ ನಿಖಿಲ್ ಎಲ್ಲಿದ್ದೀಯಪ್ಪಾ? ಎಂಬುದು ಸಖತ್ ಟ್ರೋಲ್ ಆಗಿತ್ತು. ಆದರೆ, ಈಗ ನಿಖಿಲ್ ಅವರ ತಾಯಿ ಅನಿತಾ ಕುಮಾರಸ್ವಾಮಿ ಎಲ್ಲಿದ್ದಾರೆ ಎಂಬುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ರೇಷ್ಮೆ ನಗರಿ ಖ್ಯಾತಿಯ ರಾಮನಗರದಲ್ಲಿ ಸದ್ಯ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಜನರ ಸಮಸ್ಯೆಗಳಿಗೆ ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪಂದಿಸುತ್ತಿಲ್ಲ, ಕ್ಷೇತ್ರಕ್ಕೂ ಭೇಟಿ ನೀಡುತ್ತಿಲ್ಲ ಎಂಬುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಇದಕ್ಕೆ ಬಳಸಿಕೊಂಡು ಬಿಜೆಪಿ ಕಾರ್ಯಕರ್ತರಾದ ರುದ್ರ ದೇವರು ಹಾಗೂ ವಿನೋದ್ ಭಗತ್ ಎಂಬುವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.
ಮೂರು ದಿನಕ್ಕೂ ನಾಲ್ಕು ದಿನಕ್ಕೊ ಮೋರಿ ನೀರು ಬಿಡುತ್ತಿದ್ರು, ಈಗ ಅದನ್ನು ಬಿಡುತ್ತಿಲ್ಲ, ನಲ್ಲಿಯಲ್ಲಿ 15 ದಿನಗಳಾದರೂ ನೀರು ಬರುತ್ತಿಲ್ಲ, ಶಾಸಕರಾದ ಅನಿತಕ್ಕೆ ಯಾವಾಗ ಸಮಸ್ಯೆ ಬಗೆಹರಿಸುತ್ತಾರೋ ಗೊತ್ತಿಲ್ಲ, ಅನಿತಾಕ್ಕೆ ಎಲ್ಲಿದ್ದೀರಿ ಎಂದು ವಿಡಿಯೋದಲ್ಲಿ ಕೇಳಿದ್ದಾರೆ.
Advertisement