ಶುಕ್ರವಾರ ಬೆಳಿಗ್ಗೆ 6.30ರ ಸುಮಾರಿಗೆ ಮಂಗಳೂರಿನ ರಥಬೀದಿಯಲ್ಲಿ ಬಂದರು ಠಾಣೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಮಂಜುನಾಥ್ ಅನುಮಾನಾಸ್ಪದವಾಗಿ ಬ್ಯಾಗೊಂದನ್ನು ಹೆಗಲ ಮೇಲೆ ಹಾಕಿಕೊಂಡು ತಿರುಗುತ್ತಿದ್ದ. ಈ ವೇಳೆ ವಿಚಾರಿಸಲಾಗಿ ಸಮರ್ಪಕ ಉತ್ತರ ದೊರಕದಿದ್ದಾಗ ಬ್ಯಾಗ್ ಪರಿಶೀಲಿಸಲಾಗಿದೆ. ಆಗ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಕೋಟಿ ರು. ಪತ್ತೆಯಾಗಿದೆ.