ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ಭಕ್ತರಿಗೆ ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ನೀರಿನ ಅಭಾವ ಉಂಟಾಗಿದೆ, ಇನ್ನೂ ದೇವಸ್ಥಾನದ ವಸತಿ ಗೃಹಗಳಿಗೂ ಹೆಚ್ಚಿನ ನೀರು ಖರ್ಚಾಗುತ್ತದೆ. ಈಗ ನೀರಿನ ಅಭಾವ ಇರುವುದರಿಂದ ಧರ್ಮಸ್ಥಳ ಯಾತ್ರಿಕರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಡಾ. ಹೆಗ್ಗಡೆಯವರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.