ಈ ತಾಲ್ಲೂಕಿನ ಮೂಲಭೂತ ಸೌಕರ್ಯ, ಶಿಕ್ಷಣ, ಆರೋಗ್ಯ ಸ್ಥಿತಿಯನ್ನು ಸುಧಾರಿಸಲು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ರಚನೆಯಾದರೂ ಕೂಡ ಪರಿಸ್ಥಿತಿ ಸುಧಾರಿಸಿಲ್ಲ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹೆಚ್ ಟಿ ನಾಗಿ ರೆಡ್ಡಿ, ಸರಿಯಾದ ಸಾರ್ವಜನಿಕ ಸಾರಿಗೆ ಕೊರತೆ, ಕುಡಿಯುವ ನೀರಿನ ಕೊರತೆ, ಮೂಲಭೂತ ಸೌಕರ್ಯಗಳಿಲ್ಲದಿರುವುದರಿಂದ ಮತ್ತು ಇಲ್ಲಿನ ಅತಿಯಾದ ಬಿಸಿಲಿನ ಹವಾಮಾನದಿಂದಾಗಿ ಶಿಕ್ಷಕರು ಇಲ್ಲಿ ಕೆಲಸ ಮಾಡಲು ಹಿಂದೇಟು ಹಾಕುತ್ತಾರೆ. ಸರ್ಕಾರ ಮೊಳಕಾಲ್ಮೂರಿಗೆ ವಿಶೇಷ ಪ್ರದೇಶ ಸ್ಥಿತಿಗತಿಯನ್ನು ಒದಗಿಸಿ ಶಿಕ್ಷಕರು ಇಲ್ಲಿ ಕೆಲಸ ಮಾಡಲು ಮುಂದಾಗಲು ವಿಶೇಷ ವೇತನ ವ್ಯವಸ್ಥೆ ಜಾರಿಗೆ ತರಬೇಕು ಎನ್ನುತ್ತಾರೆ. ಮೊಳಕಾಲ್ಮೂರಿನಿಂದ ಚಿತ್ರದುರ್ಗದ ಬೇರೆ ತಾಲ್ಲೂಕುಗಳಿಗೆ ಶಿಕ್ಷಕರ ವರ್ಗಾವಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕು ಎನ್ನುತ್ತಾರೆ.