ಮತ್ತೊಂದು ಮೂಲಗಳ ಪ್ರಕಾರ ಡಿ.ಕೆ. ಶಿವಕುಮಾರ್ ಮತ್ತು ಎಚ್.ಡಿ. ರೇವಣ್ಣ ಸೇರಿ ಬಾಲಕೃಷ್ಣ ಬೆಂಬಲಿಗರಿಗೆ ಈ ಹುದ್ದೆ ತಪ್ಪಿಸುವಲ್ಲಿ ಸಫಲವಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಚಿವ ಡಿ.ಕೆ. ಶಿವಕುಮಾರ್ ವಿದೇಶೀ ಪ್ರವಾಸ ಮುಗಿಸಿ ಬರುವವರೆಗೂ ಚುನಾವಣೆ ಮುಂದೂಡಲು ತೀರ್ಮಾನಿಸಲಾಗಿದೆ. ಉಪಮುಖ್ಯಮಂತ್ರಿ ಪರಮೇಶ್ವರ್, ಡಿ.ಕೆ. ಶಿವಕುಮಾರ್ , ಡಿ.ಕೆ. ಸುರೇಶ್ , ಕೃಷ್ಣ ಭೈರೇಗೌಡ, ಎಸ್ ಟಿ ಸೋಮಶೇಖರ್, ನೇತೃತ್ವದಲ್ಲಿ ಮತ್ತೊಮ್ಮೆ ಸಭೆ ನಡೆಸಿ ಅಧ್ಯಕ್ಷರ ಚುನಾವಣೆ ನಡೆಸಲು ಉದ್ದೇಶಿಸಿದ್ದಾರೆ ಎನ್ನಲಾಗಿದೆ.