ಚಿಕ್ಕಮಗಳೂರು: ನಾನು ಯಾವುದೇ ಸಮೀಕ್ಷೆಗಳನ್ನು ನಂಬುವುದಿಲ್ಲ, ನಾಳೆಯ ಫಲಿತಾಂಶ ನನ್ನ ಪರವಾಗಿ ಬರುತ್ತದೆ ಎಂಬ ವಿಶ್ವಾಸವಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾಲ್ಕು ಸಂಸ್ಥೆಗಳು ನನ್ನ ಪರವಾಗಿ ಹಾಗೂ ಆರು ಸಂಸ್ಥೆಗಳು ವಿರೋಧವಾಗಿ ಸಮೀಕ್ಷೆ ನಡೆಸಿದೆ. ಆದರೆ ನಾನು ಯಾವುದನ್ನೂ ಸ್ವೀಕರಿಸುವುದಿಲ್ಲ. ಶೃಂಗೇರಿ ಶಾರದಾಂಬೆಯ ಆರ್ಶೀವಾದ ನನ್ನ ಮೇಲಿದೆ, ಶೃಂಗೇರಿ ಶಾರದಾಂಬೆಗೆ ವಿಶೇಷ ಪೂಜೆ ಮಾಡಲು ಬಂದಿದ್ದೇನೆ ಎಂದರು.
ನಾನು ಯಾವುದೇ ಸಮೀಕ್ಷೆಗಳನ್ನು ಪರಿಗಣಿಸುವುದಿಲ್ಲ, 2004ರಲ್ಲಿ ಎರಡು ಸೀಟ್ ಜೆಡಿಎಸ್ಗೆ ಬರುತ್ತದೆ ಎಂದು ಸಮೀಕ್ಷೆಗಳು ಹೇಳಿದ್ದವು, ಆಗ 58 ಸ್ಥಾನಗಳನ್ನು ಜೆಡಿಎಸ್ ಪಡೆದಿತ್ತು ಎಂದು ನೆನಪಿಸಿದರು.