ಈ ಆದೇಶ ಹೊರಡಿಸಿದ ದಿನಾಂಕದ ನಂತರ ಚಿಕಿತ್ಸೆ ಪಡೆದಿರುವ ಪ್ರಕರಣಗಳಿಗೆ ಮಾತ್ರ ಇದು ಅನ್ವಯವಾಗಲಿದೆ. ಅರ್ಹತಾ ಮೊತ್ತ 3 ಲಕ್ಷ ರೂ.ಗಳನ್ನು ಮೀರಿದ ಹಾಗೂ 5 ಲಕ್ಷ ರೂ.ವರೆಗಿನ ಮರುಪಾವತಿ ಪ್ರಕರಣಗಳನ್ನು ಇಲಾಖಾ ಮುಖ್ಯಸ್ಥರು, ತಮ್ಮ ನಿರ್ದಿಷ್ಟ ಶಿಫಾರಸ್ಸಿನೊಂದಿಗೆ ಪ್ರಸ್ತಾವನೆಗಳನ್ನು ನೇರವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸಲ್ಲಿಸದೆ ಸಂಬಂಧಪಟ್ಟ ಸಚಿವಾಲಯದ ಇಲಾಖಾ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಗಳ ಮೂಲಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗಳ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ ಅವರಿಗೆ ಸಲ್ಲಿಸಬೇಕು. ನಂತರ ಆಡಳಿತ ಇಲಾಖೆ ಈ ಪ್ರಸ್ತಾವನೆಗಳನ್ನು ಯಾಂತ್ರಿಕವಾಗಿ ಪರಿಗಣಿಸದೇ ಅಪವಾದಾತ್ಮಕವಾದ ಸಂದರ್ಭವೆಂದು ದೃಢಪಟ್ಟಲ್ಲಿ ಮಾತ್ರ ನಿರ್ದಿಷ್ಟ ಶಿಫಾರಸುಗಳೊಂದಿಗೆ ಪ್ರಸ್ತಾವನೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಕಳುಹಿಸಬೇಕು. ಇದೇ ರೀತಿ 5 ಲಕ್ಷ ರೂ.ಮೀರಿದ ಹಾಗೂ ಇನ್ನಿತರ ನಿಯಮಗಳ ಸಡಿಲಿಕೆ ಪ್ರಕರಣಗಳನ್ನು ಪರಿಶೀಲಿಸಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಮೂಲಕ ಮುಖ್ಯಮಂತ್ರಿ ಅವರ ಆದೇಶಕ್ಕಾಗಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.