ಚಾಲಕ ಬರೆದಿಟ್ಟಿದ್ದ ಪತ್ರದ ಆಧಾರದಲ್ಲಿ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದು, ಮಹಿಳೆ ಹಾಗೂ ಆಕೆಯ ತವರುಮನೆಯವರ ವಿರುದ್ಧ ಆತ್ಮಹೆತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣ ದಾಖಲಿಸಿದ್ದಾರೆ. ಮೃತ ಶ್ರೀನಿವಾಸ್ ಅವರ ಸಹೋದರ ರವೀಶ್ವರ.ಎಸ್ ನೀಡಿರುವ ಮಾಹಿತಿಯ ಪ್ರಕಾರ ಶ್ರೀನಿವಾಸ್ ಹಾಗೂ ಸುಮಾ ಅವರೊಟ್ಟಿಗೇ ಇದ್ದರು. ಶ್ರೀನಿವಾಸ್ ರಾತ್ರಿ ಮನೆಗೆ ತಡವಾಗಿ ಬರುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಆಗಾಗ್ಗೇ ಕಲಹ ಉಂಟಾಗುತ್ತಿತ್ತು. ಇದರಿಂದ ಬೇಸತ್ತಿದ್ದ ಸುಮಾ ತವರು ಮನೆಗೆ ತೆರಳಿದ್ದರು. ಅಲ್ಲಿಂದ ವಾಪಸ್ಸಾದ ನಂತರ ಸುಮಾ ಹಾಗೂ ಅವರ ತವರುಮನೆಯ ಸದಸ್ಯರು ಧರ್ಮಸ್ಥಳಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಶ್ರೀನಿವಾಸ್ ಅವರೊಂದಿಗೆ ಹೋಗುವುದಕ್ಕೆ ನಿರಾಕರಿಸಿದ್ದಾರೆ. ಈ ಸಂಬಂಧ ಇತ್ತೀಚೆಗಷ್ಟೇ ಕಲಹ ಉಂಟಾಗಿತ್ತು.