ಬೆಳಗ್ಗೆ ಪರಮೇಶ್ವರ್ ಮನೆಯಲ್ಲಿ ಉಪಹಾರ ಕೂಟದ ನೆಪದಲ್ಲಿ ಸಭೆ ಸೇರಿದ ಕಾಂಗ್ರೆಸ್ ಸಚಿವರು ಮುಖ್ಯಮಂತ್ರಿ ಮೇಲೆ ಪೂರ್ಣವಿಶ್ವಾಸವಿದೆ.ಮೈತ್ರಿ ಮುಂದುವರೆಸಲು ನಮ್ಮ ಆಕ್ಷೇಪವಿಲ್ಲ ಎಂಬ ಸಂದೇಶ ನೀಡಿದರು. ಇದರಿಂದಾಗಿ ಮುಖ್ಯಮಂತ್ರಿ ರಾಜೀನಾಮೆ ಗೊಂದಲಕ್ಕೆ ತೆರೆ ಬಿದ್ದಿತು. ಅಲ್ಲದೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಥವಾ ಜೆಡಿಎಸ್ ಸಚಿವರುಗಳು ,ಶಾಸಕರು ,ಮೈತ್ರಿ ಸರ್ಕಾರದ ಮೇಲೆ ಅನಾವಶ್ಯಕ ಆರೋಪ , ದೂರು , ಮುಖ್ಯಮಂತ್ರಿ ಬದಲಾವಣೆಯಂತಹ ಹೇಳಿಕೆಗಳನ್ನು ನೀಡದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಸಚಿವರಿಗೆ ಖಡಕ್ ಸೂಚನೆ ನೀಡಿದ್ದಾರೆ. ಅಂತೆಯೇ ಜೆಡಿಎಸ್ ಸಚಿವರು ,ಶಾಸಕರು ಸಹ ಇದೇ ನೀತಿಯನ್ನು ಅನುಸರಿಸಿ ಪಾಲಿಸುವಂತೆಯೂ ಸೂಚನೆ ನೀಡಿದ್ದಾರೆ. ಮಹತ್ವದ ಸಭೆ, ಪಕ್ಷ ಹಾಗೂ ಸರ್ಕಾರದ ಗೊಂದಲಗಳ ಬಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದಕ್ಕೆ ಸದ್ಯಕ್ಕೆ ತಡೆಬಿದ್ದಿದೆ.