ಯುಎನ್ಐ ಕನ್ನಡ ಸುದ್ದಿಸಂಸ್ಥೆ ಜೊತೆ ಮಾತನಾಡಿದ ಸಚಿವರು, ಬಸ್ ಪ್ರಯಾಣ ದರ ಹೆಚ್ಚಳ ಬಗ್ಗೆ ಈ ಹಿಂದೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಪ್ರಸ್ತಾಪ ಕಳುಹಿಸಲಾಗಿತ್ತಾದರೂ ಅದರ ಬಗ್ಗೆ ಇನ್ನೂ ಚರ್ಚೆಯೇ ನಡೆದಿಲ್ಲ. ನಮ್ಮ ಹಂತದಲ್ಲಿಯೂ ಇನ್ನೂ ಚರ್ಚೆಯಾಗಿಲ್ಲ. ಪ್ರಯಾಣ ದರ ಹೆಚ್ಚಳ ಬಗ್ಗೆ ಮುಖ್ಯಮಂತ್ರಿಗಳು ಅನುಮತಿ ನೀಡಿಲ್ಲ. ಪ್ರಸ್ತಾವನೆ ಇನ್ನೂ ಚರ್ಚೆಯ ಹಂತದಲ್ಲಿಯೇ ಮುಖ್ಯಮಂತ್ರಿ ಅವರ ಬಳಿಯಲ್ಲಿಯೇ ಇದೆ ಎಂದರು.