ಬೆಂಗಳೂರು: ಭ್ರಷ್ಟಾಚಾರ ಎನ್ನುವುದು ರಾಜಕೀಯ ಕ್ಷೇತ್ರವನ್ನೂ ಮೀರಿ ಮಾಧ್ಯಮ ಕ್ಷೇತ್ರಕ್ಕೂ ಕಾಲಿರಿಸಿದ್ದು, ಮಾಧ್ಯಮ ಕ್ಷೇತ್ರದಲ್ಲಿಯೇ ಹೆಚ್ಚು ಶ್ರೀಮಂತರಿದ್ದಾರೆ. ರಾಜಕೀಯ ಪಕ್ಷ ಸೇರಿದಂತೆ ಮಾಧ್ಯಮಗಳಲ್ಲಿಯೂ ಆಂತರಿಕ ಪ್ರಜಾಪ್ರಭುತ್ವ ಸತ್ತು ಹೋಗಿದೆ ಎಂದು ಸಭಾಧ್ಯಕ್ಷ ಕೆ.ರಮೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಹಿರಿಯ ಪತ್ರಕರ್ತ ಸಿ.ಎಂ. ರಾಮಚಂದ್ರ ಅವರ 'ಕಾಕ್ಪಿಟ್ ಆಫ್ ಇಂಡಿಯಾಸ್ ಪೊಲಿಟಿಕಲ್ ಬ್ಯಾಟಲ್ಸ್'' ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಬಳಿಕ ಅವರು ಮಾತನಾಡಿದರು.
Advertisement