ಮಾಜಿ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯ ಕಾರ್ಯಕ್ರಮದ ನಂತರ ಮಾದ್ಯಮದವರೊಡನೆ ಮಾತನಾಡಿದ ರೈ "ಭಾರತವು ಸ್ವಾತಂತ್ರ್ಯವನ್ನು ಪಡೆದ ವೇಳೆ ಭಾರತ ಹಿಂದುಳಿದ ರಾಷ್ಟ್ರವಾಗಿತ್ತು. ಆಗ ನೆಹರು ಅವರು ಜಗತ್ತಿನ ಇತರೆ ಮುಂದುವರಿದ ದೇಶಗಳ ಸಾಲಿನಲ್ಲಿ ಭಾರತವನ್ನೂ ನಿಲ್ಲಿಸುವ ಜವಾಬ್ದಾರಿಯನ್ನು ಹೊಂದಿದ್ದರು. ಆರ್ಥಿಕತೆಯ ಬಲಪಡಿಸುವಿಕೆಗೆ ಕಾರಣವಾದ ಅವರ ದೂರದೃಷ್ಟಿ ಮೆಚ್ಚಬೇಕು. ಆದರೆ ಅಂದು ಬ್ರಿಟೀಷರೊಡನೆ ಕೈಜೋಡಿಸಿದ ಆ ಮೂಲಕ ಸ್ವಾತಂತ್ರ ಹೋರಾಟಗಾರರನ್ನು ವಂಚಿಸಿ ಇಂದು ಅಂತಹಾ ಮೇರು ನಾಯಕರಿಗೆ ಅಗೌರವ ಸೂಚಿಸುತ್ತಿದ್ದಾರೆ.ನೆಹರು ಕುಟುಂಬದ ಮುಂದಿನ ಪೀಳಿಗೆಯವರೂ ಕೂಡ ಈ ದೇಶಕ್ಕೆ ತಮ್ಮ ಜೀವನವನ್ನು ತ್ಯಾಗ ಮಾಡಿದ್ದಾರೆ ಆದರೆ ಈಗ ಅವರನ್ನು ಅವಮಾನಿಸಲಾಗುತ್ತಿದೆ.. ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಬಿಂಬಿಸಲಾಗುತ್ತಿದೆ ಹಾಗೆಯೇ ಮಾಜಿ ಪ್ರಧಾನಿ ರಾಜೀವ್ ಗಾಂಧಿ ನಂ/೧ ಭ್ರಷ್ಟಾಚಾರಿ ಎಂದು ಹೇಳುತ್ತಿದ್ದಾರೆ.ಇದು ಶುದ್ದ ನಾಚಿಕೆಗೇಡಿನ ಸಂಗತಿ" ಎಂದರು.