ಪತ್ರಿಕೆಯ ಸಂಪಾದಕರ ವಿರುದ್ಧ ಹೇರಲಾಗಿರುವ ಪ್ರಕರಣ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದ್ದು, ಪತ್ರಿಕಾ ಸ್ವಾತಂತ್ರವನ್ನು ಕಗ್ಗೊಲೆ ಮಾಡಿದಂತೆ ಎಂದು ಕೃಷ್ಣ ಅಭಿಪ್ರಾಯಪಟ್ಟಿದ್ದು, ಪ್ರಕರಣವನ್ನು ಕೂಡಲೆ ಹಿಂಪಡೆಯಬೇಕೆಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಈ ಕುರಿತಂತೆ ಪತ್ರ ಬರೆದಿರುವ ಅವರು, ವಿಶ್ವೇಶ್ವರ ಭಟ್ಟರ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ತಕ್ಷಣ ಹಿಂಪಡೆಯಬೇಕೆಂದು ಕೃಷ್ಣಾ ಪತ್ರದಲ್ಲಿ ತಿಳಿಸಿದ್ದಾರೆ.