ಮೋದಿ ಸಂಪುಟ ಸೇರಿದ ರಾಜ್ಯ ಸಂಸದರಿಗೆ ಶುಭ ಹಾರೈಸಿದ ಸಿಎಂ

ಪ್ರಧಾನಿ ಮೋದಿಯವರ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ನೇಮಕವಾಗಿರುವ ರಾಜ್ಯದ ನಾಲ್ವರು ನಾಯಕರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಪ್ರಧಾನಿ ಮೋದಿಯವರ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ನೇಮಕವಾಗಿರುವ ರಾಜ್ಯದ ನಾಲ್ವರು ನಾಯಕರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. 

ಸಂಸದರಾದ ಡಿವಿ ಸದಾನಂದಗೌಡ, ನಿರ್ಮಲಾ ಸೀತಾರಾಮನ್, ಪ್ರಹ್ಲಾದ ಜೋಷಿ ಹಾಗೂ ಸುರೇಶ್ ಅಂಗಡಿ ಅವರುಗಳಿಗೆ ಸಿಎಂ ಕುಮಾರಸ್ವಾಮಿ ಶುಭ ಕೋರಿದ್ದಾರೆ.

"ರಾಜ್ಯದಿಂದ ಆಯ್ಕೆಯಾದ ಎಲ್ಲಾ ಸಂಸದರಿಗೆ ಶುಭಾಶಯಗಳು, ರಾಜ್ಯದ ಅಭಿವೃದ್ದಿಗಾಗಿ ಮೂವರೂ ಸಂಸದರು ಸರ್ಕಾರದೊಡನೆ ಸಹಕರಿಸುತ್ತೀರಿ ಎಂದು ಭಾವಿಸಿದ್ದೇನೆ" ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದ ಸದಾನಂದಗೌಡ, ಹುಬ್ಬಳ್ಳಿ-ಧಾರವಾಡದ ಪ್ರಹ್ಲಾದ್ ಜೋಷಿ ಹಾಗೂ ಬೆಳಗಾವಿ ಕ್ಷೇತ್ರದ ಸುರೇಶ್ ಅಂಗಡಿ ಅವರುಗಳು ಮೋದಿ ಸಚಿವ ಸಂಪುಟದಲ್ಲಿ ಮಂತ್ರಿಗಳಾಗಿ ನೇಮಕವಾಗಿದ್ದಾರೆ. ಇದಲ್ಲದೆ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಮಹತ್ವದ ಹಣಕಾಸು ಸಚಿವರಾಗಿ ನೇಮಕವಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com