ಮಳೆಗಾಗಿ ದೇವರ ಮೊರೆ ಹೋದ ಸರ್ಕಾರ: ದೇವಾಲಯಗಳಲ್ಲಿ ಪರ್ಜನ್ಯ ಜಪ, ಹೋಮ ನಡೆಸಲು ಆದೇಶ

ಮಳೆ ಕೊರತೆಯಿಂದ ಭೀಕರ ಬರಗಾಲಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ದೇವರ ಮೊರೆ ಹೋಗಿರುವ ಸರ್ಕಾರ ರಾಜ್ಯದ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪರ್ಜನ್ಯ ಜಪ, ಅಭಿಷೇಕ , ಹೋಮ, ವಿಶೇಷ ಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಸಚಿವಾಲಯ ಎಲ್ಲಾ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಮಳೆ ಕೊರತೆಯಿಂದ ಭೀಕರ ಬರಗಾಲಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ  ದೇವರ ಮೊರೆ ಹೋಗಿರುವ ಸರ್ಕಾರ ರಾಜ್ಯದ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪರ್ಜನ್ಯ ಜಪ, ಅಭಿಷೇಕ , ಹೋಮ, ವಿಶೇಷ ಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಸಚಿವಾಲಯ ಎಲ್ಲಾ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ.

ಉತ್ತಮ ಮಳೆ ,ಬೆಳೆಗಾಗಿ ಹಿಂದಿನಿಂದಲೂ ಪೂಜೆ , ಅಭಿಷೇಕ ,ಜಪ ತಪ, ಪೂಜೆ ಅನುಷ್ಟಾನ ಮಾಡಿಕೊಂಡು ಬಂದಿರುವ ಸಂಪ್ರದಾಯವಿದೆ. ಅದರಂತೆ ಪ್ರಸಕ್ತ ಸಾಲಿನಲ್ಲಿ ರಾಜ್ಯ ಎದುರಿಸುತ್ತಿರುವ ಬರಗಾಲ ಸಂಕಷ್ಟದಿಂದ ಪಾರಾಗಲು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಪರ್ಜನ್ಯ ಜಪ, ವಿಶೇಷ ಪೂಜೆ , ಹೋಮ ನಡೆಸುವುದು ಅವಶ್ಯಕವೆಂದು ಸರ್ಕಾರಕ್ಕೆ ಮನವರಿಕೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ದೇವಾಲಯಗಳಲ್ಲಿ ಪೂಜೆ ನಡೆಸುವಂತೆ ಅದೇಶಿಸಿದೆ.

ದೇವಾಲಯಗಳಲ್ಲಿ ಜೂನ್ 6 ರ ಗುರುವಾರದಂದು ಬ್ರಾಹ್ಮೀ ಮುಹೂರ್ತದಿಂದ ಈ ವಿಶೇಷ ಪೂಜಾ ಅಭಿಯಾನ ಆರಂಭಿಸಿ ನಿರಂತರವಾಗಿ ವಿಶೇಷ ಪೂಜೆ, ಅಭಿಷೇಕ, ಹೋಮ,ಹಾಗೂ ಪರ್ಜನ್ಯ ಜಪಗಳನ್ನು ಅನುಷ್ಟಾನಗೊಳಿಸುವಂತೆ ಸೂಚಿಸಲಾಗಿದೆ.ವಿಶೇಷ ಪೂಜೆ ಗೆ ಗರಿಷ್ಟ 10,001 ರೂ ಖರ್ಚು ಮಾಡಲು ಹಾಗೂ ಆರ್ಥಿಕವಾಗಿ ಶಕ್ತಿಯುಳ್ಳ ದೇವಾಲಯಗಳಲ್ಲಿ ದೇವಸ್ಥಾನದ ನಿಧಿಯಿಂದ ಬಳಸುವಂತೆಯೂ ನಿರ್ದೇಶನ ನೀಡಿದೆ.
ಈ ಬಾರಿಯೂ ಪೂಜೆ, ಹವನ ಹೋಮ, ಜಪ ತಪ ಜೊತೆಗೆ ಮೋಡ ಬಿತ್ತನೆಯೂ ನಡೆಸುತ್ತಿರುವುದು ಆಡಳಿತಾರೂಢ ಮೈತ್ರಿ ನಾಯಕರ ಗೊಂದಲಕಾರಿ ಮನಸ್ಥಿತಿಯನ್ನು ಇದು ಪ್ರದರ್ಶಿಸಿದೆ.
ಮತ್ತೊಂದೆಡೆ ಶೃಂಗೇರಿ ಜಗದ್ಗುರು ಭಾರತೀ ತೀರ್ಥ ಶ್ರೀಗಳು ರಾಜ್ಯದ ಜನರು ತಮ್ಮ ಮನೆಗಳಲ್ಲಿ ಪ್ರತೀ ದಿನ ರಾತ್ರಿ ತುಪ್ಪದ ದೀಪವನ್ನು ದೇವರ ಮುಂದು ಒಂದು ವಾರಗಳ ಕಾಲ ಹೆಚ್ಚುವಂತೆ ಕರೆ ನೀಡಿದ್ದಾರೆ. ಅಲ್ಲದೆ ಉತ್ತಮ ಮಳೆ ಬೆಳೆಯಾಗುವಂತೆ ದೇವರಲ್ಲಿ ಪ್ರಾರ್ಥಿಸುವಂತೆಯೂ ಅವರು ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com