ಬೆಂಗಳೂರು: ಮಳೆ ಕೊರತೆಯಿಂದ ಭೀಕರ ಬರಗಾಲಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ದೇವರ ಮೊರೆ ಹೋಗಿರುವ ಸರ್ಕಾರ ರಾಜ್ಯದ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪರ್ಜನ್ಯ ಜಪ, ಅಭಿಷೇಕ , ಹೋಮ, ವಿಶೇಷ ಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಸಚಿವಾಲಯ ಎಲ್ಲಾ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ.
ಉತ್ತಮ ಮಳೆ ,ಬೆಳೆಗಾಗಿ ಹಿಂದಿನಿಂದಲೂ ಪೂಜೆ , ಅಭಿಷೇಕ ,ಜಪ ತಪ, ಪೂಜೆ ಅನುಷ್ಟಾನ ಮಾಡಿಕೊಂಡು ಬಂದಿರುವ ಸಂಪ್ರದಾಯವಿದೆ. ಅದರಂತೆ ಪ್ರಸಕ್ತ ಸಾಲಿನಲ್ಲಿ ರಾಜ್ಯ ಎದುರಿಸುತ್ತಿರುವ ಬರಗಾಲ ಸಂಕಷ್ಟದಿಂದ ಪಾರಾಗಲು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಪರ್ಜನ್ಯ ಜಪ, ವಿಶೇಷ ಪೂಜೆ , ಹೋಮ ನಡೆಸುವುದು ಅವಶ್ಯಕವೆಂದು ಸರ್ಕಾರಕ್ಕೆ ಮನವರಿಕೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ದೇವಾಲಯಗಳಲ್ಲಿ ಪೂಜೆ ನಡೆಸುವಂತೆ ಅದೇಶಿಸಿದೆ.
Advertisement