ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಮತ್ತು ಮೀರತ್ನಲ್ಲಿ ನಿನ್ನೆ ಸಿಬಿಐ ಅಧಿಕಾರಿಗಳು 15 ಸ್ಥಳಗಳಲ್ಲಿ ದಾಳಿ ನಡೆಸಿದ ಬೆನ್ನಲ್ಲೇ ಶನಿವಾರ ಇದೇ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.
ಕರ್ನಾಟಕ ಸರ್ಕಾರದಿಂದ ಅನುಮತಿ ಪಡೆದ ನಂತರ ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ. ಎಂ. ವಿಜಯ್ ಶಂಕರ್, ಅಂದಿನ ಬೆಂಗಳೂರು ಉತ್ತರ, ಉಪವಿಭಾಗಾಧಿಕಾರಿ ಎಲ್. ಸಿ. ನಾಗರಾಜ್, ಬೆಂಗಳೂರು ಉತ್ತರ ಉಪವಿಭಾಗದ ಗ್ರಾಮ ಲೆಕ್ಕಿಗ ಮಂಜುನಾಥ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಸಿಬಿಐ ಹೇಳಿಕೆಯಲ್ಲಿ ತಿಳಿಸಿದೆ.
ಸಿಬಿಐ ಶುಕ್ರವಾರ ಬೆಂಗಳೂರಿನ 11 ಮತ್ತು ಮೀರತ್, ಮಂಡ್ಯ, ರಾಮನಗರ ಮತ್ತು ಬೆಳಗಾವಿ ಜಿಲ್ಲೆಗಳ ತಲಾ ಒಂದು ಸ್ಥಳ ಸೇರಿದಂತೆ 15 ಸ್ಥಳಗಳಲ್ಲಿ ಶೋಧ ನಡೆಸಿತ್ತು.
Advertisement
Advertisement