ದೊಡ್ಡಬಳ್ಳಾಪುರ: 20 ವರ್ಷದ ಯುವತಿಯ ಕತ್ತು ಸೀಳಿ ಹತ್ಯೆ

ಕುರಿ ಮೇಯಿಸುತ್ತಿದ್ದ ಯುವತಿಯನ್ನು ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಲಿಂಗನಹಳ್ಳಿ ಬಳಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ದೊಡ್ಡಬಳ್ಳಾಪುರ: ಕುರಿ ಮೇಯಿಸುತ್ತಿದ್ದ ಯುವತಿಯನ್ನು ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಲಿಂಗನಹಳ್ಳಿ ಬಳಿ ನಡೆದಿದೆ.

ಲಿಂಗನಹಳ್ಳಿ ಗ್ರಾಮದ 20 ವರ್ಷದ ಅಂಜಲಿ ಕೊಲೆಯಾದ ಯುವತಿ.

ಕೊಲೆ ಮಾಡಿದವರು ಯಾರು, ಯಾವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಈ ಸಂಬಂಧ ದೊಡ್ಡಬಳ್ಳಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com