10 ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಯುವಕನೋರ್ವನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಶ್ರೀನಿವಾಸ ನಗರದ 11ನೇ ಮೈನ್ ನಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಯುವಕನೋರ್ವನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಶ್ರೀನಿವಾಸ ನಗರದ 11ನೇ ಮೈನ್ ನಲ್ಲಿ ನಡೆದಿದೆ.

20 ವರ್ಷದ ಸುದರ್ಶನ್ ಕೊಲೆಯಾದಾತ. ಸುದರ್ಶನ್ 10 ದಿನಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಎಂದು ತಿಳಿದು ಬಂದಿದೆ.

ಮೃತ ಸುದರ್ಶನ್, ಬ್ಯಾಟರಾಯನಪುರ, ಗಿರಿನಗರ , ಹನುಮಂತನಗರ ಠಾಣೆಗಳಲ್ಲಿ ಕಳ್ಳತನ , ಸುಲಿಗೆ ಇತ್ಯಾದಿ ಪ್ರಕರಣಗಳಲ್ಲಿ ಬೇಕಾಗಿದ್ದವನು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com