ಬೆಂಗಳೂರು: ವಿಧಾನಸಭೆಯ 17 ಶಾಸಕರನ್ನು ಅನರ್ಹಗೊಳಿಸಿದ್ದ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಆದೇಶವನ್ನು ಎತ್ತಿಹಿಡಿದು ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪು ಬಗ್ಗೆ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ.
ಹಾವೂ ಸಾಯ್ಬಾರ್ದು, ಕೋಲೂ ಮುರೀಬಾರ್ದು ಎನ್ನುವ ರೀತಿ ಸುಪ್ರೀಂ ಕೋರ್ಟ್ ನ ತೀರ್ಪು ಪ್ರಕಟಗೊಂಡಿದೆ. ಮುಂದಿನ ಚುನಾವಣೆಯಲ್ಲಿ ಈ ಅನರ್ಹ ಶಾಸಕರು ಸ್ಪರ್ಧಿಸಿದರೆ ಅವರನ್ನು ಸೋಲಿಸಿ ಸ್ವಾಭಿಮಾನ ಮೆರೆಯಿರಿ ಕನ್ನಡಿಗರೆ ಎಂದು ಪ್ರಕಾಶ್ ರಾಜ್ ಟ್ವಿಟ್ಟರ್ ನಲ್ಲಿ ಕರೆಕೊಟ್ಟಿದ್ದಾರೆ.
ಡಿಸೆಂಬರ್ 5ರಂದು ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು ಅದರಲ್ಲಿ ಈ ಅನರ್ಹರು ಸ್ಪರ್ಧಿಸಬಹುದಾಗಿದೆ.
Advertisement