ಮಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಟ್ರಸ್ಟ್ ನಿರ್ಮಿಸಬೇಕೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ನ ಮೂಲಗಳು ತಿಳಿಸಿವೆ.
ರಾಮ ಜನ್ಮಭೂಮಿ ಹೋರಾಟದಲ್ಲಿ ಪೇಜಾವರ ಶ್ರೀಗಳು ಪ್ರಮುಖ ಪಾತ್ರ ವಹಿಸಿದ್ದರು. ವೈಷ್ಣವ ಪಂಥದ ಪ್ರಮುಖ ಶ್ರೀಗಳಾಗಿದ್ದಾರೆ, ಜೊತೆಗೆ ದಕ್ಷಿಣ ಭಾರತದಲ್ಲಿ ಪ್ರಮುಖ ಸ್ವಾಮೀಜಿಗಳಲ್ಲಿ ಒಬ್ಬರಾಗಿರುವ ಕಾರಣ ಅವರನ್ನು ಟ್ರಸ್ಟ್ ಗೆ ನೇಮಕ ಮಾಡಲಾಗುವುದೆಂದು ಹೇಳಲಾಗುತ್ತಿದೆ.
ಇನ್ನೂ ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಪೇಜಾವರ ಶ್ರೀಗಳ ಆಪ್ತ ಸಹಾಯಕ ಸುಬ್ರಮಣ್ಯ, ಶ್ರೀಗಳನ್ನು ಟ್ರಸ್ಟ್ ಗೆ ನೇಮಕ ಮಾಡುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
Advertisement