ಮೈಸೂರು: ಶಾಸಕ ತನ್ವೀರ್ ಸೇಠ್ ಅವರ ಮೇಲೆ ಯುವಕನೊಬ್ಬ ಕತ್ತಿಯಿಂದ ಕುತ್ತಿಗೆ ಭಾಗಕ್ಕೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಗಾಯಗೊಂಡಿರುವ ತನ್ವೀರ್ ಸೇಠ್ ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಬನ್ನಿಮಂಟಪದ ಬಾಲಭವನದ ಆವರಣದಲ್ಲಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ತನ್ವೀರ್ ಸೇಠ್ ಅವರ ಕುತ್ತಿಗೆಯ ಭಾಗಕ್ಕೆ ಯುವಕನೋರ್ವ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ ಎನ್ನಲಾಗಿದೆ.
ಆರೋಪಿಯನ್ನು ಎನ್. ಆರ್. ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
Advertisement