ಮೈಸೂರು: ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ ಅವರಿಗೆ ಭದ್ರತೆ ನೀಡುವಲ್ಲಿ ವಿಫಲವಾದ ಆರೋಪದ ಮೇಲೆ ಅವರ ಗನ್ಮ್ಯಾನ್, ನಗರ ಸಶಸ್ತ್ರ ಮೀಸಲು (ಸಿಎಆರ್) ಪೊಲೀಸ್ ಪೇದೆ ಫೈರೋಜ್ ಖಾನ್ ಅವರನ್ನು ನಗರ ಪೊಲೀಸ್ ಆಯುಕ್ತರು ಮಂಗಳವಾರ ಅಮಾನತುಗೊಳಿಸಿದ್ದಾರೆ.
ಕರ್ತವ್ಯಲೋಪದ ಆರೋಪದ ಮೇಲೆ ಫೈರೋಜ್ ಖಾನ್ ಅವರನ್ನು ಅಮಾನತು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಹೇಳಿದ್ದಾರೆ.
ದಾಳಿ ನಡೆದಾಗ ಫೈರೋಜ್ ಖಾನ್, ತನ್ವೀರ್ ಸೇಠ್ ಹಿಂದೆ ಇದ್ದರೂ, ದಾಳಿಯನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ಭಾನುವಾರ ಮದುವೆ ಸಮಾರಂಭವೊಂದಕ್ಕೆ ಹೋಗಿದ್ದ ತನ್ವೀರ್ ಸೇಠ್ ಅವರ ಮೇಲೆ ಫರಾನ್ ತನ್ವೀರ್ ಎಂಬ ವ್ಯಕ್ತಿ ಆಶೀರ್ವಾದ ಪಡೆಯುವ ನೆಪದಲ್ಲಿ ಹತ್ತಿರಕ್ಕೆ ಹೋಗಿ ಚೂರಿಯಿಂದ ಕುತ್ತಿಗೆಗೆ ಚುಚ್ಚಿದ್ದ. ಫರಾನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
Advertisement